15.9 C
New York
12 May 2026
Karnataka

ಬಿಜೆಪಿಯಿಂದ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಉಚ್ಚಾಟನೆ

ಏಪ್ರಿಲ್ 23-2024 swabhimananews

    ಬಿಜೆಪಿಯಿಂದ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಉಚ್ಚಾಟನೆ
    ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆರು ವರ್ಷ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.

    ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದುದರಿಂದ, ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ.

    Swabhimananews

    ಮುಂದೆ ಈಶ್ವರಪ್ಪ ಅವ‌ರ ನಡೆ ಏನೆಂದು ಕಾದು ನೋಡಬೇಕಿದೆ.

    Related posts

    ಎಸ್‍ಸಿ-ಎಸ್‍ಟಿ ಮೀಸಲು ಹಣ ಬಳಕೆಗೆ ಪಂಚತಂತ್ರ-2 ಜಾರಿ: ಸಚಿವ ಪ್ರಿಯಾಂಕ್ ಖರ್ಗೆ

    Swabhimana News Desk

    ದಲಿತರ PTCL ಭೂಮಿಯಲ್ಲಿ ಅಕ್ರಮವಾಗಿ ಖಾಸಗಿ ಶಾಲೆಗೆ ರಸ್ತೆ ನಿರ್ಮಾಣ, ಸರಕಾರದ 4 ಕೋಟಿ ರೂಪಾಯಿ ದುರುಪಯೋಗದ ಕುರಿತು ದಲಿತ ಮುಖಂಡ ಶೇಖರ್ ಹಾವಂಜೆ ಆಕ್ರೋಶ.

    Swabhimana News Desk

    ಕಾಂಗ್ರೆಸ್ ಸರಕಾರ ದಲಿತರ ನಿಧಿಯನ್ನು ದುರ್ಬಳಕೆ ಮಾಡಿರುವುದನ್ನು ಉನ್ನತ ಮಟ್ಟದ ತನಿಖೆ ನಡೆಸುವಂತೆ. ಆಗ್ರಹಿಸಿ ಕ ದ ಸಂ ಸ ಭೀಮವಾದ ಮತ್ತು RPIK ವತಿಯಿಂದ ರಾಜ್ಯಪಾಲಾರಿಗೆ ದೂರು.

    Swabhimana News Desk

    Leave a Comment