18 August 2026
Coastal

ಚುನಾವಣಾ ದಿನದಂದು ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಿ : ಜಿಲ್ಲಾಧಿಕಾರಿ ಸೂಚನೆ…!!

ಏಪ್ರಿಲ್ -23-2024 swabhimana news

ಉಡುಪಿ, ಏಪ್ರಿಲ್ 23 : ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಘೋಷಿಸಿದ್ದು, ಅದರಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನವು ಏಪ್ರಿಲ್ 26 ರಂದು ನಡೆಯಲಿದೆ.

18 ವರ್ಷ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳು ಮತದಾನ ಮಾಡುವುದು ಸಂವಿಧಾನ ಬದ್ಧ ಹಕ್ಕು ಆಗಿದ್ದು, ಈ ಸಂದರ್ಭದಲ್ಲಿ ಬಲಾಢ್ಯ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣಕ್ಕಾಗಿ ಎಲ್ಲ ವಿದ್ಯಾರ್ಥಿಗಳು ಮತದಾನ ಕಾರ್ಯದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಚುನಾವಣಾ ಆಯೋಗವು ಏ. 26 ರಂದು ರಜೆ ಘೋಷಿಸಿರುತ್ತದೆ. ಆದ್ದರಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ತರಬೇತಿ ನಡೆಸುತ್ತಿರುವ ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳನ್ನು ಮತದಾನ ದಿನದಂದು ಬಂದ್ ಮಾಡಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳು ಮತ ಚಲಾಯಿಸಲು ಅವಕಾಶ ಕಲ್ಪಿಸುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

, swabhimananews

Related posts

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ನೇಮಕ…!!

Swabhimana News Desk

ಉಡುಪಿಯಲ್ಲೊಂದು ಖಾಸಗಿ ಬಟ್ಟೆ ಮಳಿಗೆಗಾಗಿ ರಾಜ್ಯ ಹೆದ್ದಾರಿಯ ಡಿವೈಡರನ್ನೇ ಒಡೆದು ಹಾಕಿದ ಹೆದ್ದಾರಿಪ್ರಾಧಿಕಾರದ ಆಧಿಕಾರಿಗಳು.ನಗರಸಭೆಯ ಅಧಿಕಾರಿಗಳು ಅಧ್ಯಕ್ಷರು,ಸದಸ್ಯರು ಶಾಮೀಲು,ಸಾರ್ವಜನಿಕರ ಆಕ್ರೋಶ.

Swabhimana News Desk

ಬಯಲು ರಂಗಮಂದಿರ ಹಾಗೂ ಆಟದ ಮೈದಾನ ನಿರ್ಮಾಣ ಮಾಡುವಂತೆ ಒತ್ತಾಯ ವಿಜಯಕುಮಾರ್ ಕೊಡವೂರು…!

Swabhimana News Desk

Leave a Comment