28 C
New York
17 September 2026
Coastal

ಚುನಾವಣಾ ದಿನದಂದು ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಿ : ಜಿಲ್ಲಾಧಿಕಾರಿ ಸೂಚನೆ…!!

ಏಪ್ರಿಲ್ -23-2024 swabhimana news

ಉಡುಪಿ, ಏಪ್ರಿಲ್ 23 : ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಘೋಷಿಸಿದ್ದು, ಅದರಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನವು ಏಪ್ರಿಲ್ 26 ರಂದು ನಡೆಯಲಿದೆ.

18 ವರ್ಷ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳು ಮತದಾನ ಮಾಡುವುದು ಸಂವಿಧಾನ ಬದ್ಧ ಹಕ್ಕು ಆಗಿದ್ದು, ಈ ಸಂದರ್ಭದಲ್ಲಿ ಬಲಾಢ್ಯ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣಕ್ಕಾಗಿ ಎಲ್ಲ ವಿದ್ಯಾರ್ಥಿಗಳು ಮತದಾನ ಕಾರ್ಯದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಚುನಾವಣಾ ಆಯೋಗವು ಏ. 26 ರಂದು ರಜೆ ಘೋಷಿಸಿರುತ್ತದೆ. ಆದ್ದರಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ತರಬೇತಿ ನಡೆಸುತ್ತಿರುವ ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳನ್ನು ಮತದಾನ ದಿನದಂದು ಬಂದ್ ಮಾಡಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳು ಮತ ಚಲಾಯಿಸಲು ಅವಕಾಶ ಕಲ್ಪಿಸುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

, swabhimananews

Related posts

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ನೇಮಕ…!!

Swabhimana News Desk

ಬೋಧಿಸತ್ವ ಬುದ್ಧ ಫೌಂಡೇಶನ್ ಉಡುಪಿ ಜಿಲ್ಲೆ, ಬೋಧಿಸತ್ವ ಬುದ್ಧ ವಿಹಾರ ಹಾವಂಜೆ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಮಾರ್ಗ (ರಿ) ಉಡುಪಿ ಜಿಲ್ಲೆ ಇವರ ಜಂಟಿ ಸಹಯೋಗದಲ್ಲಿ. ಭೀಮ್ ಜಯಂತೋತ್ಸವ ಆಚರಣೆ.

Swabhimana News Desk

ಬುದ್ಧ ಪೂರ್ಣಿಮೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ, ಬಹುಮಾನ ವಿತರಿಸಿ, ಹತ್ತನೇ ತರಗತಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಿದ.ಬುದ್ದಿಸ್ಟ್ ಸೊಸೈಟಿ ಆಫ್ ಇಂಡಿಯಾ.ಉಡುಪಿ

Swabhimana News Desk

Leave a Comment