17 February 2026
Coastal

ಚುನಾವಣಾ ದಿನದಂದು ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಿ : ಜಿಲ್ಲಾಧಿಕಾರಿ ಸೂಚನೆ…!!

ಏಪ್ರಿಲ್ -23-2024 swabhimana news

ಉಡುಪಿ, ಏಪ್ರಿಲ್ 23 : ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಘೋಷಿಸಿದ್ದು, ಅದರಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನವು ಏಪ್ರಿಲ್ 26 ರಂದು ನಡೆಯಲಿದೆ.

18 ವರ್ಷ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳು ಮತದಾನ ಮಾಡುವುದು ಸಂವಿಧಾನ ಬದ್ಧ ಹಕ್ಕು ಆಗಿದ್ದು, ಈ ಸಂದರ್ಭದಲ್ಲಿ ಬಲಾಢ್ಯ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣಕ್ಕಾಗಿ ಎಲ್ಲ ವಿದ್ಯಾರ್ಥಿಗಳು ಮತದಾನ ಕಾರ್ಯದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಚುನಾವಣಾ ಆಯೋಗವು ಏ. 26 ರಂದು ರಜೆ ಘೋಷಿಸಿರುತ್ತದೆ. ಆದ್ದರಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ತರಬೇತಿ ನಡೆಸುತ್ತಿರುವ ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳನ್ನು ಮತದಾನ ದಿನದಂದು ಬಂದ್ ಮಾಡಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳು ಮತ ಚಲಾಯಿಸಲು ಅವಕಾಶ ಕಲ್ಪಿಸುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

, swabhimananews

Related posts

ನಳಂದ ಬೌದ್ಧ ವಿಹಾರ ಟಿ ನರಸೀಪುರದ ಬಂತೆ ಪೂಜ್ಯ ಬೋದಿ ರತ್ನ ರವರ ನೇತೃತ್ವದಲ್ಲಿ ಗೃಹಪ್ರವೇಶ.

Swabhimana News Desk

ಸೌಜನ್ಯ ಪ್ರಕರಣ ಮರು ತನಿಖೆಗೆ ಒತ್ತಾಯಿಸಿ RPI. KARNATAKA ಮತ್ತು KDSS. ಭೀಮವಾದ(ರಿ) ಉಡುಪಿ ಜಿಲ್ಲೆ ಇದರ ವತಿಯಿಂದ ಸರ್ಕಾರಕ್ಕೆ ಮನವಿ.

Swabhimana News Desk

ಸುರತ್ಕಲ್: ಗಾಳಿ-ಮಳೆಗೆ ಕುಸಿದು ಬಿದ್ದ ಟೋಲ್ ಗೇಟ್ ಕ್ಯಾಬಿನ್ – ಅಪಾಯದಿಂದ ಪಾರಾದ ಸ್ಕೂಟರ್ ಸವಾರ!

Swabhimana News Desk

Leave a Comment