16 July 2026
Coastal

ಚುನಾವಣಾ ದಿನದಂದು ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಿ : ಜಿಲ್ಲಾಧಿಕಾರಿ ಸೂಚನೆ…!!

ಏಪ್ರಿಲ್ -23-2024 swabhimana news

ಉಡುಪಿ, ಏಪ್ರಿಲ್ 23 : ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಘೋಷಿಸಿದ್ದು, ಅದರಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನವು ಏಪ್ರಿಲ್ 26 ರಂದು ನಡೆಯಲಿದೆ.

18 ವರ್ಷ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳು ಮತದಾನ ಮಾಡುವುದು ಸಂವಿಧಾನ ಬದ್ಧ ಹಕ್ಕು ಆಗಿದ್ದು, ಈ ಸಂದರ್ಭದಲ್ಲಿ ಬಲಾಢ್ಯ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣಕ್ಕಾಗಿ ಎಲ್ಲ ವಿದ್ಯಾರ್ಥಿಗಳು ಮತದಾನ ಕಾರ್ಯದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಚುನಾವಣಾ ಆಯೋಗವು ಏ. 26 ರಂದು ರಜೆ ಘೋಷಿಸಿರುತ್ತದೆ. ಆದ್ದರಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ತರಬೇತಿ ನಡೆಸುತ್ತಿರುವ ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳನ್ನು ಮತದಾನ ದಿನದಂದು ಬಂದ್ ಮಾಡಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳು ಮತ ಚಲಾಯಿಸಲು ಅವಕಾಶ ಕಲ್ಪಿಸುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

, swabhimananews

Related posts

ಬ್ರಹ್ಮಾವರ: ಸೈಬರ್‌ ಅಪರಾಧ ಜಾಗೃತಿ ಕಾರ್ಯಾಗಾರ – ತಿಳುವಳಿಕೆ ಇದ್ದವರೇ ಸೈಬರ್‌ ಅಪರಾಧದಿಂದ ವಂಚನೆಗೊಳಗಾಗುವುದು ಹೆಚ್ಚು: ಜಯಪ್ರಕಾಶ ಹೆಗ್ಡೆ.

Swabhimana News Desk

ಕೋಟತಟ್ಟು ಗ್ರಾಮದಲ್ಲಿ ಅಕ್ರಮವಾಗಿ, ಕಾನೂನು ಬಾಹಿರವಾಗಿ, ಜನವಸತಿ ಪ್ರದೇಶದಲ್ಲಿ, ಗ್ರಾಮಸ್ಥರಿಗೆ ಮಾರಕ ವಾಗಿರುವ ಜನತಾ ಫಿಶ್ ಮಿಲ್ಲ್ ಬಂದ್ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ (ರಿ) ಉಡುಪಿ ಜಿಲ್ಲೆ.ಮತ್ತು RPIK ಪಕ್ಷ ಚುನಾವಣಾಧಿಕಾರಿಗೆ ದೂರು.

Swabhimana News Desk

ಮೂವತ್ತಮೂರು ಎಕರೆ ಕೆರೆ ಈವಾಗ ಇರೋದು ಬರೀ ಇಪ್ಪತ್ತ ಮೂರು ಎಕರೆ.!

Swabhimana News Desk

Leave a Comment