7 September 2026
Coastal

ಮೊಬೈಲ್ ವಿಷಯದಲ್ಲಿ ಗಂಡ ಹೆಂಡತಿ ಜಗಳ ಪತ್ನಿಯ ಕೊಲೆ.

ಉಡುಪಿ: ಜೂನ್ -20-2025 Swabhimananews

ಕುಂದಾಪುರ: ಮೊಬೈಲ್ ವಿಚಾರವಾಗಿ ಗಲಾಟೆ ಮಾಡಿದ ಪತಿ ಕೋಪಗಂಡು ಪತ್ನಿಯನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಕುಂದಾಪುರ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಘಟನೆ ಜೂ.19 ರಾತ್ರಿ ವೇಳೆ ನಡೆದಿದೆ. ಪ್ರಕರಣದ ಆರೋಪಿ ಮೃತರ ಪತಿ ಗಣೇಶ ಪೂಜಾರಿ(42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಹೊಸಮಠ ನಿವಾಸಿ ರೇಖಾ(27) ಕೊಲೆಗೀಡಾದ ಮಹಿಳೆ. ವೃತ್ತಿಯಲ್ಲಿ ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಗಣೇಶ್ ಪೂಜಾರಿ ಹಾಗೂ ರೇಖಾಳಿಗೆ 8 ವರ್ಷದ ಹಿಂದೆ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದರು. ರೇಖಾ ಪೆಡ್ರೋಲ್ ಬಂಕ್ವೊಂದರಲ್ಲಿ ಕೆಲಸಕ್ಕಿದ್ದು ಗಣೇಶ್ ಮೊಬೈಲ್ ವಿಚಾರದಲ್ಲಿ ಆಗಾಗ್ಗೆ ಗಲಾಟೆ ಮಾಡುತ್ತಿದ್ದ. ಗುರುವಾರ ತಡರಾತ್ರಿ ಮನೆಗೆ ಬಂದು ಕ್ಷುಲ್ಲಕ ಕಾರಣಕ್ಕೆ ಪತ್ನಿಯೊಂದಿಗೆ ಜಗಳ ಮಾಡಿದ ಗಣೇಶ, ಪತ್ನಿಗೆ ಕತ್ತಿಯಿಂದ ಕಡಿದನು. ಇದರಿಂದ ಗಂಭೀರ ಗಾಯಗೊಂಡ ರೇಖಾ ಸ್ಥಳದಲ್ಲಿ ಮೃತಪಟ್ಟರು ಎಂದು ತಿಳಿದು ಬಂದಿದೆ. ಅಲ್ಲಿಂದ ಪರಾರಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಗಣೇಶ್ ಪೂಜಾರಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Swabhimananews

Related posts

ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಸಾಹೇಬ್ ಅಂಬೇಡ್ಕರ್ ರವರಿಗೆ ಮತ್ತು ರಾಜ್ಯದ, ದೇಶದ ದಲಿತ ಸಮುದಾಯಕ್ಕೆ ಬಹಿರಂಗವಾಗಿ ನಿಂದಿಸಿ, ಅಪಮಾನ ಮಾಡಿರುವ ಉಡುಪಿ ಹಿಂದೂ ಜಾಗರಣಾ ವೇದಿಕೆಯ ಉಮೇಶ್ ನಾಯ್ಕನನ್ನು ಕಾಂಗ್ರೆಸ್ ಸರಕಾರ ಈ ಕೂಡಲೇ ಬಂಧಿಸಿ, ಅಂಬೇಡ್ಕರ್ ಮತ್ತು ಸಂವಿಧಾನದ ಪರ ಇರುವುದನ್ನು ಸಾಬೀತು ಪಡಿಸಲಿ.ಶೇಖರ್ ಹಾವಂಜೆ.

Swabhimana News Desk

ಬೈಂದೂರು ರಾಜಾರೋಷವಾಗಿ ಪ್ರಭಾವಿ ವ್ಯಕ್ತಿಗಳು ಎಲ್ಲೆಂದರಲ್ಲಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ.ಕಣ್ಣು, ಬಾಯಿ, ಕಿವಿ ಇದ್ದೂ ಕುರುಡರು,ಮೂಗರು,ಕಿವುಡರಾದ ಉಡುಪಿ ಜಿಲ್ಲೆಯ ಅಧಿಕಾರಿಗಳು.

Swabhimana News Desk

ಪ್ರೀಯಕರನ ಜೊತೆ ಸೇರಿ ಗಂಡನನ್ನು ಕೊಂದೇ ಬಿಟ್ಟ ರೀಲ್ಸ್ ರಾಣಿ ಹೆಂಡತಿ ಪ್ರತಿಮಾ.

Swabhimana News Desk

Leave a Comment