19.3 C
New York
30 March 2026
Coastal

ಉಡುಪಿ: ಯೂನಿಯನ್ ಬ್ಯಾಂಕ್ ಸೀಲ್ ದುರ್ಬಳಕೆ: ನಗರಸಭೆಗೆ ತೆರಿಗೆ ವಂಚನೆ – ಪೌರಾಯುಕ್ತರಿಂದ ದೂರು ದಾಖಲು.ಹತ್ತಾರು ಕೋಟಿ ರೂಪಾಯಿ ವಂಚಿಸಿರುವ ಬಗ್ಗೆ ಅನುಮಾನ..!

Udupi-February-13-2026 swabhimananewsಉಡುಪಿ:ನಗರಸಭೆಯ ಪೌರಾಯುಕ್ತರಾದ ಮಹಾಂತೇಶ್ ನಗರ ಸಭೆ, ಉಡುಪಿ ಇವರ ಕಚೇರಿಯಲ್ಲಿ ಆಸ್ತಿತೆರಿಗೆ ಪಾವತಿಯನ್ನು ಇ-ಸ್ವೀಕೃತಿ ಮೂಲಕ ಚಲನ್ ಸೃಜನೆ ಮಾಡಿ ಯೂನಿಯನ್ ಬ್ಯಾಂಕ್ ನಲ್ಲಿ ನಗರಸಭೆ ಖಾತೆ ಸಂಖ್ಯೆ ಗೆ ಜಮಾ ಮಾಡಲಾಗುತ್ತದೆ.ದಿನಾಂಕ 03/02/2026 ರಂದು ಕಚೇರಿಯಲ್ಲಿ ಆಸ್ತಿತೆರಿಗೆ ಪಾವತಿಯನ್ನು ತುಲನೆ ಮಾಡುತ್ತಿರುವಾಗ ದಿನಾಂಕ 28/01/2026 ರಂದು ಆಸ್ತಿತೆರಿಗೆ ಪಾವತಿ ಎಂದು ಚಲನ್ ಮೇಲೆ ಯೂನಿಯನ್ ಬ್ಯಾಂಕ್ ನ ಸೀಲ್ ಲಭ್ಯವಿದ್ದು, ಆದರೆ ಅದೇ ದಿನಾಂಕದಲ್ಲಿ ಯೂನಿಯನ್ ಬ್ಯಾಂಕ್ ಪುಸ್ತಕದ ವಿವರ ಪಟ್ಟಿಯಲ್ಲಿ ಪಾವತಿ ಆಗಿರುವ ಬಗ್ಗೆ ನಮೂದು ಇಲ್ಲದಿರುವುದು ಕಂಡು ನಗರಸಭೆಯ ಸಿಬ್ಬಂದಿ ಯವರು ಪೌರಾಯುಕ್ತರ ಗಮನಕ್ಕೆ ತಂದಿರುತ್ತಾರೆ.ಮುಂದುವರೆದು ದಿನಾಂಕ 04/02/2026 ರಂದು ಪುನಃ ಆಸ್ತಿತೆರಿಗೆ ಪಾವತಿಯನ್ನು ತುಲನೆ ಮಾಡುತ್ತಿರುವಾಗ ದಿನಾಂಕ 04/02/2026 ರಂದು ಯೂನಿಯನ್ ಬ್ಯಾಂಕ್ ಸೀಲ್ ಹೊಂದಿದ ಚಲನ್ ಗಳನ್ನು ಪರಿಶೀಲನೆ ನಡೆಸಿದಾಗ ಅವುಗಳಲ್ಲಿ ಈಗಾಗಲೇ ದಿನಾಂಕ 28/01/2026 ರಂದು ಜನರೇಟ್ ಆಗಿದ್ದ ಚಲನ್ ಸಂಖ್ಯೆ ಆಗಿರುತ್ತವೆ.ಒಂದೇ ಚಲನ್ ಸಂಖ್ಯೆಗೆ ಎರಡು ಬೇರೆ ಬೇರೆ ದಿನಾಂಕಗಳಲ್ಲಿ ಯೂನಿಯನ್ ಬ್ಯಾಂಕ್ ಸೀಲ್ ಉಳ್ಳ ಚಲನ್ ಗಳು ದೊರೆತಿದ್ದು, ಆರೋಪಿಗಳು ಯೂನಿಯನ್ ಬ್ಯಾಂಕ್ ನ ಸೀಲ್ ನ್ನು ದುರ್ಬಳಕೆ ಮಾಡಿ ಆಸ್ತಿ ತೆರಿಗೆ ಪಾವತಿ ಮಾಡಿದ ಹಣವನ್ನು ಪಡೆದು ಮೋಸ ವಂಚನೆ ಮಾಡಿರುವುದಾಗಿದೆ.ಇಂದು ಮಾತ್ರವಲ್ಲದೆ ಇದರ ಹಿಂದೆ ಬ್ಯಾಂಕ್ ನ ಮತ್ತು ನಗರಸಭೆಯ ಅಧಿಕಾರಿಗಳು ಸಿಬ್ಬಂದಿಗಳು ಸೇರಿ ಹತ್ತಾರು ಕೋಟಿ ರೂಪಾಯಿ ವಂಚಿಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 26/2026 ಕಲಂ: 336(2), 336(3), 340(2), 318(4) R/W 3(5) BNS ರಂತೆ ಪ್ರಕರಣ ದಾಖಲಾಗಿರುತ್ತದೆ.
Swabhimananews

Related posts

ಭೂಗಳ್ಳರ ವಿರುದ್ಧ ದೂರು ನೀಡಿದ ಸಾಮಾಜಿಕ ಹೋರಾಟಗಾರ ದಲಿತ ಮುಖಂಡ ಶೇಖರ್ ಹಾವಂಜೆ ರವರಿಗೆ ಜೀವ ಬೆದರಿಕೆ!

Swabhimana News Desk

ಹಾವಂಜೆಯ ಬೋಧಿಸತ್ವ ಬುದ್ಧವಿಹಾರದಲ್ಲಿ  ಭೀಮಕೋರೆಗಾಂವ್ ವಿಜಯೋತ್ಸವ ದಿನಾಚರಣೆ ಕಾರ್ಯಕ್ರಮ.

Swabhimana News Desk

ಕುಂದಾಪುರ ಬ್ಲಾಕ್ ಕಾಂಗ್ರೆಸ್‌ ವತಿಯಿಂದ ನಗರದಲ್ಲಿ ಬೃಹತ್ ಪಾದಯಾತ್ರೆ: ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಮತಯಾಚನೆ-ಅಭಿವೃದ್ಧಿಗೆ ನಿಮ್ಮ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ.

Swabhimana News Desk

Leave a Comment