9.3 C
New York
19 April 2026
Coastal

ಬ್ರಹ್ಮಾವರ ತಾಲೂಕಿನಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ.

swabhimananews@gmail.com
July 13, 2023. ಉಡುಪಿ,

ಜುಲೈ 12 -2023 ರಂದು ಉಡುಪಿ ಲೋಕಾಯುಕ್ತ ಪೊಲೀಸ್ ವಿಭಾಗದ ವತಿಯಿಂದ ಬ್ರಹ್ಮಾವರ ತಾಲೂಕಿನಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮವು ದಿನಾಂಕ 12-07-2023 ರಂದು ಚಾಂತಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

swabhimananews@gmail.com
ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒಟ್ಟು 10 ಅಹವಾಲುಗಳನ್ನು ಸ್ವೀಕರಿಸಲಾಗಿದ್ದು, ಅವುಗಳಲ್ಲಿ 9 ನ್ನು ಸ್ಥಳದಲ್ಲೆ ಇತ್ಯರ್ಥಪಡಿಸಲಾಯಿತು. 1 ದೂರು ಅರ್ಜಿಗೆ ಸಂಬಂಧಿಸಿದಂತೆ ಪ್ರಪತ್ರ 1 ಮತ್ತು 2 ನ್ನು ನೀಡಲಾಯಿತು.

swabhimananews@gmail.com
ಸಾರ್ವಜನಿಕರ ಅರ್ಜಿಗಳನ್ನು ಅನಗತ್ಯ ವಿಳಂಬ ಮಾಡದೇ ಶೀಘ್ರದಲ್ಲಿ ವಿಲೇವಾರಿ ಮಾಡುವಂತೆ ಹಾಗೂ ಸೂಕ್ತ ಕಾರಣವಿಲ್ಲದೇ ತಿರಸ್ಕಾರ ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

swabhimananews@gmail.com

ಮಳೆಗಾಲ ಪ್ರಾರಂಭವಾಗಿದ್ದು, ಅತಿಯಾದ ಮಳೆಬಂದು ಪ್ರವಾಹ ಉಂಟಾಗಿ ಜೀವಹಾನಿ ಹಾಗೂ ಬೆಳೆಹಾನಿ ಉಂಟಾಗುವ ಸಾಧ್ಯತೆಯಿರುವುದರಿಂದ ಕೂಡಲೇ ಮುನ್ನೆಚ್ಚರಿಕೆ ಕ್ರಮವಹಿಸುವಂತೆ ಹಾಗೂ ಪರಿಹಾರ ನೀಡುವಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಸಾಂಕ್ರಮಿಕ ಕಾಯಿಲೆಗಳು ಹರಡುವ ಸಾಧ್ಯತೆಯಿರುವುದರಿಂದ ಸೂಕ್ತ ಮುನ್ನಚ್ಚೆರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

swabhimananews@gmail.com

ಸರ್ವೆ ಇಲಾಖೆಯಿಂದ ಸರ್ವೆ ವಿಳಂಬವಾಗುತ್ತಿರುವ ಬಗ್ಗೆ ಹಾಗೂ ನಕ್ಷೆ ನೀಡದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಮಳೆಗಾಲದಲ್ಲಿ ವಿದ್ಯುತ್ ತಂತಿಗಳು ತುಂಡಾಗಿ ಬೀಳುವ ಸಾಧ್ಯತೆಯಿದ್ದು ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿ ಜೀವಹಾನಿಯಾಗುವ ಸಾಧ್ಯತೆಯಿರುವುದರಿಂದ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಇಲಾಖೆಗೆ ಸೂಚಿಸಲಾಯಿತು.
swabhimananews@gmail.com
ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ಉಡುಪಿ ವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಕಾಶ್.ಕೆ.ಸಿ, ಪೊಲೀಸ್ ನಿರೀಕ್ಷಕ ಜಯರಾಮ.ಡಿ.ಗೌಡ, ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ ಮೂರ್ತಿ,

swabhimananews@gmail.com
ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಮಂಜುನಾಥ ಶೇಪೂರ, ಬ್ರಹ್ಮಾವರ ಎಡಿಎಲ್ಆರ್ ತಿಪ್ಪರಾಯ ತೊರವಿ, ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ ನಾಯ್ಕ, ಚಾಂತಾರು ಪಿಡಿಓ ಸತೀಶ ನಾಯ್ಕ್, ಬ್ರಹ್ಮಾವರ ತಾಲೂಕು ಪಂಚಾಯತ್ ಯೋಜನಾಧಿಕಾರಿ ಸಂದೇಶ್ ಶೆಟ್ಟಿ, ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಜಶೇಖರ ವಂದಲಿ, ಕಂದಾಯ ನಿರೀಕ್ಷಕ ಲಕ್ಷಿನಾರಾಯಣ ಭಟ್, ಬ್ರಹ್ಮಾವರ ತೋಟಗಾರಿಕೆ ಅಧಿಕಾರಿ ಮಹಾಂತೇಶ ಕಾಂಬಳೆ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿಯ ಹಿರಿಯ ಮೇಲ್ವಿಚಾರಕಿ ಭಾಗಿರಥಿ ಆಚಾರ್ಯ, ಮೆಸ್ಕಾಂ ಸಹಾಯಕ ಅಭಿಯಂತರ ಅಶೋಕ್ ಪೂಜಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್ ಬಿ.ಬಿ, ಬ್ರಹ್ಮಾವರ ಪಶು ಸಂಗೋಪನೆ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ:ಪ್ರದೀಪ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

swabhimananews@gmail.com

Related posts

ಬಾಬಾ ಸಾಹೇಬ್ ಡಾ .ಬಿ ಆರ್ ಅಂಬೇಡ್ಕರ್ ರವರ ಹೋರಾಟ ವಿಶ್ವಕ್ಕೆ ಮಾದರಿ ಡಾ. ಏಕಾಂತಗಿರಿ

Swabhimana News Desk

ಬೋಧಿಸತ್ವ ಬುದ್ಧ ಫೌಂಡೇಶನ್ ಉಡುಪಿ ಜಿಲ್ಲೆ,ಬೋಧಿಸತ ಬುದ್ಧ ವಿಹಾರ.ಹಾವಂಜೆ, ಕದಸಂಸ ಭೀಮವಾದ (ರಿ) ಉಡುಪಿ ಜಿಲ್ಲೆ ಇವರ ಜಂಟಿ ಸಹಯೋಗದಲ್ಲಿ ನಡೆದ ವಿಧ್ಯಾರ್ಥಿಗಳಿಗೆ ಬಾಬಾಸಾಹೇಬರ ಕುರಿತ ಸ್ಪರ್ಧೆಗಳು

Swabhimana News Desk

ಉಡುಪಿಯ ಅತೀ ದೊಡ್ಡ ಡಿವೈಡರ್ ಸ್ಯಾಮ್.!! ಅಧಿಕಾರಿಗಳಿಗೆ ಡಿಸಿ ನೊಟೀಸ್. ನಗರಸಭೆ ಸಾಮಾನ್ಯ ಸಭೆಯ ನಿರ್ಣಯ ಕ್ಕಾಗಿ ಕಾಯುತ್ತಿರುವ ಸಾರ್ವಜನಿಕರು

Leave a Comment