27 November 2025
Karnataka

ಎಸ್‍ಸಿ-ಎಸ್‍ಟಿ ಮೀಸಲು ಹಣ ಬಳಕೆಗೆ ಪಂಚತಂತ್ರ-2 ಜಾರಿ: ಸಚಿವ ಪ್ರಿಯಾಂಕ್ ಖರ್ಗೆ

ಜುಲೈ-15-2023 swabhimananews@gmail.com
ಬೆಂಗಳೂರು, : ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಟ್ಟ ಹಣವನ್ನು ಸಮರ್ಪಕವಾಗಿ ಬಳಕೆ ಮಾಡಲು ಅನುಕೂಲವಾಗುವಂತೆ ಪಂಚತಂತ್ರ-2 ತಂತ್ರಜ್ಞಾನವನ್ನು ಮುಂದಿನ ತಿಂಗಳಿನಿಂದ ಜಾರಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.
swabhimananews@gmail.com
ಶುಕ್ರವಾರ ವಿಧಾನ ಪರಿಷತ್ತಿನ ಪ್ರಶೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಸದಸ್ಯ ಡಾ.ತಿಮ್ಮಯ್ಯ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪಂಚತಂತ್ರ-2 ತಂತ್ರಜ್ಞಾನ ಅಳವಡಿಕೆ ಮಾಡುವುದರಿಂದ ಯಾವ ಪಂಚಾಯಿತಿಯಲ್ಲಿ ಎಷ್ಟು ಹಣವಿದೆ. ಎಷ್ಟು ಹಣ ಖರ್ಚು ಮಾಡಿದ್ದಾರೆ. ಬಾಕಿ ಉಳಿದಿರುವ ಹಣ ಯಾಕೆ ಖರ್ಚು ಮಾಡಿಲ್ಲ ಎನ್ನುವ ಮಾಹಿತಿ ಆನ್‌ಲೈನ್‌ನಲ್ಲಿ ಲಭ್ಯವಾಗಲಿದ್ದು, ಇದರಿಂದ ಲೋಪ ಎದುರಾಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ತಿಳಿಸಿದರು.

swabhimananews@gmail.com
2022-23ನೆ ಸಾಲಿನಲ್ಲಿ ರಾಜ್ಯಾದ್ಯಂತ 716.55 ಕೋಟಿ ರೂ.ಹಣವನ್ನು ಪರಿಶಿಷ್ಟ ಜಾತಿ ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಡಲಾಗಿತ್ತು. ಆದರೆ, 501ಕೋಟಿ ರೂ.
swabhimananews@gmail.com.

ಮಾತ್ರ ಖರ್ಚು ಮಾಡಿದ್ದಾರೆ. ಇನ್ನೂ 217 ಕೋಟಿ ರೂ.ಗೂ ಹೆಚ್ಚು ಹಣ ಬಾಕಿ ಇದೆ. ಹಿಂದಿನ ಸರಕಾರ ಈ ಹಣದ ಬಗ್ಗೆ ಸಮರ್ಪಕವಾಗಿ ಮೇಲ್ವಿಚಾರಣೆ ಮಾಡದ ಹಿನ್ನೆಲೆಯಲ್ಲಿ ಹಣ ಉಳಿದುಕೊಂಡಿದೆ. ಮುಂದಿನ ದಿನಗಳಲ್ಲಿ ಆ ರೀತಿ ಲೋಪವಾಗದಂತೆ ಪಂಚತಂತ್ರ-2 ತಂತ್ರಜ್ಞಾನದ ಮೂಲಕ ಎಚ್ಚರಿಕೆ ವಹಿಸಲಾಗುವುದು ಎಂದು ಹೇಳಿದರು. swabhimananews@gmail.com

Related posts

ಬೆಂಗಳೂರು: ಆರೋಪಿಯೊಬ್ಬರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನಿನ ಪ್ರತಿಯನ್ನು ಹರಿದು, ನೆಲಕ್ಕೆ ಎಸೆದು, ಜಾಮೀನು ಮಂಜೂರು ಮಾಡಿದ ಸೆಷನ್ಸ್ ನ್ಯಾಯಾಧೀಶರನ್ನು ನಿಂದಿಸಿ ನ್ಯಾಯಾಂಗದ ಪ್ರತಿಷ್ಠೆಗೆ ಧಕ್ಕೆ ತಂದ ಆರೋಪದ ಮೇಲೆ ಇನ್ಸ್‌ಪೆಕ್ಟರ್ ಹರೀಶ್ ವಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

Swabhimana News Desk

ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ

Swabhimana News Desk

ನಿಮ್ಮೊಳಗಿನ ವಿಷ ಅರಿಯದ, ವಿಷಾದ ಪಡಲೇಬೇಕಾದ ದಿನಗಳು: ವಿಶ್ವೇಶ್ವರ ಭಟ್‌ ಕುರಿತು ಪ್ರಕಾಶ್ ರಾಜ್ ಕಿಡಿನುಡಿ.

Swabhimana News Desk

Leave a Comment