11.3 C
New York
23 May 2026
Karnataka

ಎಸ್‍ಸಿ-ಎಸ್‍ಟಿ ಮೀಸಲು ಹಣ ಬಳಕೆಗೆ ಪಂಚತಂತ್ರ-2 ಜಾರಿ: ಸಚಿವ ಪ್ರಿಯಾಂಕ್ ಖರ್ಗೆ

ಜುಲೈ-15-2023 swabhimananews@gmail.com
ಬೆಂಗಳೂರು, : ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಟ್ಟ ಹಣವನ್ನು ಸಮರ್ಪಕವಾಗಿ ಬಳಕೆ ಮಾಡಲು ಅನುಕೂಲವಾಗುವಂತೆ ಪಂಚತಂತ್ರ-2 ತಂತ್ರಜ್ಞಾನವನ್ನು ಮುಂದಿನ ತಿಂಗಳಿನಿಂದ ಜಾರಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.
swabhimananews@gmail.com
ಶುಕ್ರವಾರ ವಿಧಾನ ಪರಿಷತ್ತಿನ ಪ್ರಶೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಸದಸ್ಯ ಡಾ.ತಿಮ್ಮಯ್ಯ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪಂಚತಂತ್ರ-2 ತಂತ್ರಜ್ಞಾನ ಅಳವಡಿಕೆ ಮಾಡುವುದರಿಂದ ಯಾವ ಪಂಚಾಯಿತಿಯಲ್ಲಿ ಎಷ್ಟು ಹಣವಿದೆ. ಎಷ್ಟು ಹಣ ಖರ್ಚು ಮಾಡಿದ್ದಾರೆ. ಬಾಕಿ ಉಳಿದಿರುವ ಹಣ ಯಾಕೆ ಖರ್ಚು ಮಾಡಿಲ್ಲ ಎನ್ನುವ ಮಾಹಿತಿ ಆನ್‌ಲೈನ್‌ನಲ್ಲಿ ಲಭ್ಯವಾಗಲಿದ್ದು, ಇದರಿಂದ ಲೋಪ ಎದುರಾಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ತಿಳಿಸಿದರು.

swabhimananews@gmail.com
2022-23ನೆ ಸಾಲಿನಲ್ಲಿ ರಾಜ್ಯಾದ್ಯಂತ 716.55 ಕೋಟಿ ರೂ.ಹಣವನ್ನು ಪರಿಶಿಷ್ಟ ಜಾತಿ ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಡಲಾಗಿತ್ತು. ಆದರೆ, 501ಕೋಟಿ ರೂ.
swabhimananews@gmail.com.

ಮಾತ್ರ ಖರ್ಚು ಮಾಡಿದ್ದಾರೆ. ಇನ್ನೂ 217 ಕೋಟಿ ರೂ.ಗೂ ಹೆಚ್ಚು ಹಣ ಬಾಕಿ ಇದೆ. ಹಿಂದಿನ ಸರಕಾರ ಈ ಹಣದ ಬಗ್ಗೆ ಸಮರ್ಪಕವಾಗಿ ಮೇಲ್ವಿಚಾರಣೆ ಮಾಡದ ಹಿನ್ನೆಲೆಯಲ್ಲಿ ಹಣ ಉಳಿದುಕೊಂಡಿದೆ. ಮುಂದಿನ ದಿನಗಳಲ್ಲಿ ಆ ರೀತಿ ಲೋಪವಾಗದಂತೆ ಪಂಚತಂತ್ರ-2 ತಂತ್ರಜ್ಞಾನದ ಮೂಲಕ ಎಚ್ಚರಿಕೆ ವಹಿಸಲಾಗುವುದು ಎಂದು ಹೇಳಿದರು. swabhimananews@gmail.com

Related posts

ಕೊಳೆತ ಮೊಟ್ಟೆ ಪೂರೈಕೆಯ ರಾಜ್ಯವ್ಯಾಪಿ ತನಿಖೆಗೆ ಆದೇಶ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ.

Swabhimana News Desk

ದಲಿತರ ನಿಧಿ ದುರ್ಬಳಕೆ ಕಾಂಗ್ರೆಸ್ ಸರಕಾರದ ವಿರುದ್ಧ.ಹೋರಾಟ.
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಉಡುಪಿ ಜಿಲ್ಲೆ. ಮತ್ತು ದಲಿತ ಸಂಘರ್ಷ ಸಮಿತಿ
ಭೀಮ ವಾದ (ರಿ) ಉಡುಪಿ ಜಿಲ್ಲೆ.

Swabhimana News Desk

ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ : ಆರೇಂಜ್ ಅಲರ್ಟ್ ಘೋಷಣೆ.

Swabhimana News Desk

Leave a Comment