24 July 2026
Coastal

ಕಟಪಾಡಿ:ಕಾರ್ಮಿಕರಿಬ್ಬರ ನಡುವೆ ಗಲಾಟೆ ಓರ್ವನ ಕೊಲೆ.!

ಜುಲೈ -17-2023 Swabhimananews@gmail.com
ಕಾಪು: ಕೆಲಸದ ವಿಚಾರವಾಗಿ ಕಾರ್ಮಿಕರಿಬ್ಬರ ಮಧ್ಯೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜು.17ರಂದು ಸಂಜೆ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ನಡೆದಿದೆ

ಕೊಲೆಗೀಡಾದ ಕಾರ್ಮಿಕನನ್ನು ಒರಿಸ್ಸಾ ಮೂಲದ ಗಣೇಶ್ (50) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಪರಾರಿಯಾಗಿರುವುದಾಗಿ ತಿಳಿದುಬಂದಿದೆ.

ಕಟಪಾಡಿ – ಶಿರ್ವ ರಸ್ತೆಯಲ್ಲಿರುವ ಕಟ್ಟಡ ಕಾಮಗಾರಿ ಮಾಡುತ್ತಿದ್ದ ಇವರಿಬ್ಬರ ಮಧ್ಯೆ ಕೆಲಸದ ವಿಚಾರವಾಗಿ ಜಗಳ ನಡೆದಿತ್ತು. ಹೊಡೆದಾಟದಲ್ಲಿ ಗಣೇಶ್ ಗಂಭೀರವಾಗಿ ಗಾಯಗೊಂಡಿದ್ದರೆನ್ನಲಾಗಿದೆ. ಕೂಡಲೇ ಸ್ಥಳೀಯರು ಹಾಗೂ ಇತರ ಕಾರ್ಮಿಕರು ಗಣೇಶ್‌ನನ್ನು ಆಸ್ಪತ್ರೆಗೆ ಸಾಗಿಸಿದ್ದು, ದಾರಿ ಮಧ್ಯೆ ಗಣೇಶ್ ಮೃತಪಟ್ಟರೆಂದು ತಿಳಿದುಬಂದಿದೆ.
ಸ್ಥಳಕ್ಕೆ ಉಡುಪಿ ಎಸ್ಪಿ ಅಕ್ಷಯ್ ಹಾಕೇ ಮಚೀಂದ್ರ , ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಕಾರ್ಕಳ ಡಿವೈಎಸ್ಪಿ ಅರವಿಂದ ಕುಲಗುಜ್ಜಿ, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ.ಸಿ.ಪೂವಯ್ಯ ಕಾಪು ಎಸ್ಐ ಶ್ರೀಶೈಲ ಮುರಗೋಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಬುದ್ಧ ಪೂರ್ಣಿಮೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ, ಬಹುಮಾನ ವಿತರಿಸಿ, ಹತ್ತನೇ ತರಗತಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಿದ.ಬುದ್ದಿಸ್ಟ್ ಸೊಸೈಟಿ ಆಫ್ ಇಂಡಿಯಾ.ಉಡುಪಿ

Swabhimana News Desk

ಅಕ್ರಮ ಮರಳು ಅಡ್ಡೆಗೆ ಮಂಗಳೂರು ಗಣಿ ಇಲಾಖೆಯ ಹಿರಿಯ ಭೂವಿಜ್ಞಾನಿ ಕೃಷ್ಣವೇಣಿ ಎಂಬ ದಿಟ್ಟ ಮಹಿಳಾ ಅಧಿಕಾರಿಯ ಮಿಂಚಿನ ದಾಳಿ; 20 ಇಂಜಿನ್ ಮತ್ತು ಗ್ಯಾಸ್ ಸಿಲಿಂಡರ್ ಸಹಿತ ಬೋಟ್‌ಗಳ ವಶ.

Swabhimana News Desk

ಮಣಿಪಾಲ: ವೇಶ್ಯಾವಾಟಿಕೆ ದಂಧೆ – ಇಬ್ಬರ ಬಂಧನ,ಐವರು ಯುವತಿಯರ ರಕ್ಷಣೆ, ವೇಶ್ಯಾವಾಟಿಕೆ ಕಿಂಗ್ ಪಿನ್ ಖಾಲಿದ್ ಬಂಧನಕ್ಕೆ ವ್ಯಾಪಕ ಶೋಧ!

Swabhimana News Desk

Leave a Comment