12 May 2026
Coastal

ನಳಂದ ಬೌದ್ಧ ವಿಹಾರ ಟಿ ನರಸೀಪುರದ ಬಂತೆ ಪೂಜ್ಯ ಬೋದಿ ರತ್ನ ರವರ ನೇತೃತ್ವದಲ್ಲಿ ಗೃಹಪ್ರವೇಶ.

ಜುಲೈ -23-2023 swabhimananews@gmail.com
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ
ವಾರಂಬಳ್ಳಿ ಗ್ರಾಮದಲ್ಲಿ ಉಪಾಸಕ ಪಕೀರಪ್ಪ ಹಾಗೂ ಉಪಾಸಕಿ ನಾಗಲಕ್ಷ್ಮಿ ದಂಪತಿಗಳು ಹೊಸದಾಗಿ ನಿರ್ಮಿಸಿದ ಅಪೂರ್ವ ಮನೆಯ ಗೃಹಪ್ರವೇಶ ಕಾರ್ಯಕ್ರಮವನ್ನು ನಳಂದ ಬೌದ್ಧ ವಿಹಾರ ಟಿ ನರಸೀಪುರ ಇಲ್ಲಿಯ ಬಂತೆ ಪೂಜ್ಯ ಬೋದಿ ರತ್ನ ರವರ ನೇತೃತ್ವದಲ್ಲಿ ಬುದ್ಧ ವಂದನೆ, ಧರ್ಮ ವಂದನೆ, ಸಂಘ ವಂದನೆ ಮತ್ತು ಮೈತ್ರಿ ಧ್ಯಾನ ಮಾಡುವ ಮೂಲಕ ನೆರವೇರಿಸಲಾಯಿತು.

ಆಗಮಿಸಿದವರಿಗೆ ಪಂಚಶೀಲವನ್ನು ಬೋಧಿಸಲಾಯಿತು. ಮಳೆಯ ಹೊರತಾಗಿಯೂ ಕಾರ್ಯಕ್ರಮವನ್ನು ಪಕೀರಪ್ಪ ದಂಪತಿಗಳು ಅಚ್ಚುಕಟ್ಟಾಗಿ ವ್ಯವಸ್ಥೆಪಡಿಸಿದ್ದು ಕಾರ್ಯಕ್ರಮದಲ್ಲಿ ಫಕೀರಪ್ಪ ದಂಪತಿಗಳ ಬಂಧುಗಳು ಹಿತೈಷಿಗಳು ಸ್ನೇಹಿತರು ಬುದ್ಧಿ ಸೊಸೈಟಿ ಆಫ್ ಇಂಡಿಯಾದ ಎಲ್ಲಾ ಉಪಾಸಕ ಉಪಾಸಿಕರು ಕುಟುಂಬ ಸಹಿತ ಆಗಮಿಸಿ ಮಂಗಳ ಮೈತ್ರಿಯನ್ನು ಆಶಿಸಿದರು.

ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾದ ಪರವಾಗಿ ಭಗವಾನ್ ಬುದ್ಧ ಹಾಗೂ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರ ಭಾವಚಿತ್ರವನ್ನು ಉಡುಗೊರೆಯಾಗಿ ನೀಡಿ ಪ್ರಜ್ಞೆ ಕರುಣೆ ಮೈತ್ರಿಯ ದಾರಿಯಲ್ಲಿ ಸಾಗುವಂತೆ ಆಶಿಸಲಾಯಿತು.


ಅತಿಥಿಗಳಿಗೆ ಉತ್ತಮ ಪೌಷ್ಟಿಕ ಆಹಾರ ವ್ಯವಸ್ಥೆ ಪಡಿಸಲಾಗಿತ್ತು.

ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಉಡುಪಿ ಜಿಲ್ಲೆ

swabhimananews@gmail.com

Related posts

ಬೋಧಿಸತ್ವ ಬುದ್ಧ ಫೌಂಡೇಶನ್ ಉಡುಪಿ ಜಿಲ್ಲೆ, ಬೋಧಿಸತ್ವ ಬುದ್ಧ ವಿಹಾರ ಹಾವಂಜೆ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಮಾರ್ಗ (ರಿ) ಉಡುಪಿ ಜಿಲ್ಲೆ ಇವರ ಜಂಟಿ ಸಹಯೋಗದಲ್ಲಿ. ಭೀಮ್ ಜಯಂತೋತ್ಸವ ಆಚರಣೆ.

Swabhimana News Desk

ಹಿಂದೂ ಧರ್ಮದ ನಾಗರಪಂಚಮಿಯಂದು ಪೌಷ್ಟಿಕ ಆಹಾರವಾದ ಹಾಲು, ತುಪ್ಪ, ಜೇನುತುಪ್ಪ, ಹಣ್ಣುಹಂಪಲು ಗಳನ್ನು ನಿರ್ಜೀವ ಕಲ್ಲಿಗೆ ಎರೆದು ವ್ಯರ್ಥ ಮಾಡದೆ. ಜಿಲ್ಲಾದ್ಯಂತ ಇರುವ ಅಪೌಷ್ಟಿಕತೆಯಿಂದ ಬಳಲುತ್ತಿರುವವರಿಗೆ, ಅನಾಥರಿಗೆ, ವಿಶೇಷ ಚೇತನರಿಗೆ, ರೋಗಿಗಳಿಗೆ ನೀಡಿ.

Swabhimana News Desk

ಚೇರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ, ಕೆಲವು ಸದಸ್ಯರು ಪಿಡಿಒ,ಕಾರ್ಯದರ್ಶಿಯ ಬೆಂಬಲದಲ್ಲೇ ಸರಕಾರಿ ಭೂಮಿಯಲ್ಲಿ ಅಕ್ರಮ ಅಂಗಡಿ ಕೋಣೆ ನಿರ್ಮಾಣ.ಕಣ್ಣಿದ್ದೂ ಕುರುಡರಾದ ಅಧಿಕಾರಿಗಳು. ಸಾಮಾಜಿಕ ಹೋರಾಟಗಾರರಿಗೆ ಬೆದರಿಸಿದ ಅಕ್ರಮ ಕಟ್ಟಡ ಮಾಲಿಕ..!

Swabhimana News Desk

Leave a Comment