22 July 2026
Coastal

ಸೌಜನ್ಯ ಪ್ರಕರಣ ಮರು ತನಿಖೆಗೆ ಒತ್ತಾಯಿಸಿ RPI. KARNATAKA ಮತ್ತು KDSS. ಭೀಮವಾದ(ರಿ) ಉಡುಪಿ ಜಿಲ್ಲೆ ಇದರ ವತಿಯಿಂದ ಸರ್ಕಾರಕ್ಕೆ ಮನವಿ.

ಆಗಸ್ಟ್ -16-2023
swabhimananews@gmail.com


ಕುಮಾರಿ ಸೌಜನ್ಯಳ ಹತ್ಯೆ ಪ್ರಕರಣವನ್ನು ಸರಕಾರ ಮರುತನಿಖೆ ನಡೆಸಿ ನೈಜ್ಯ ಆರೋಪಿತರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು,ಸೌಜನ್ಯ ಕುಟುಂಬಕ್ಕೆ ನ್ಯಾಯದೊಂದಿಗೆ 1 ಕೋಟಿ ರೂಪಾಯಿ ಪರಿಹಾರ ಮತ್ತು ಕುಟುಂಬದ ಒಬ್ಬರಿಗೆ ಸರಕಾರಿ ನೌಕರಿ ನೀಡಬೇಕು. ಮತ್ತು ನಿರಪರಾಧಿ ಸಂತೋಷ್ ರಾವ್ ಕುಟುಂಬಕ್ಕೂ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ. ಮಾನ್ಯ ಉಡುಪಿ ಜಿಲ್ಲಾಧಿಕಾರಿಗಳ ಮುಖಾಂತರ
ಮಾನ್ಯ ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಿಗೆ RPI Karnataka ಮತ್ತು ದಲಿತ ಸಂಘರ್ಷ ಸಮಿತಿ ಭೀಮವಾದ (ರಿ) ಉಡುಪಿ ಜಿಲ್ಲೆ ಮನವಿ ಸಲ್ಲಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಕಳೆದ 11 ವರ್ಷಗಳ ಹಿಂದೆ
ಕುಮಾರಿ ಸೌಜನ್ಯಳನ್ನು ಅತ್ಯಂತ ಕ್ರೂರವಾಗಿ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಬಗ್ಗೆ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಿದ್ದು.
ಸುದೀರ್ಘ ಸಮಯದ ಬಳಿಕ ಸಿಬಿಐ ವಿಶೇಷ ನ್ಯಾಯಾಲಯ ಸೌಜನ್ಯ ಪ್ರಕರಣ ಸಾಕ್ಷಾಧಾರಗಳು ಇಲ್ಲದ ಕಾರಣ ನೈಜ್ಯ ಆರೋಪಿತರನ್ನು ಪತ್ತೆ ಹಚ್ಚುವಲ್ಲಿ ವಿಫಲವಾಗಿದೆ.ಹಾಗೂ ನಿರಪರಾಧಿ ಸಂತೋಷ್ ರಾವ್ ಕಳೆದ 11 ವರ್ಷಗಳಿಂದ ಜೈಲು ಶಿಕ್ಷೆಗೆ ಒಳಪಡಿಸಿ ಸೌಜನ್ಯ ಹಾಗೂ ಸಂತೋಷ್ ರಾವ್ ಕುಟುಂಬ ಕಳೆದ 11 ವರ್ಷಗಳಿಂದಲೂ ಅತ್ಯಂತ ನೋವಿನಿಂದ, ಹಿಂಸೆಯಿಂದ ಕಳೆದಿದೆ.ಕೊನೆಗೂ ಈ ಎರಡೂ ಕುಟುಂಬಗಳು ನ್ಯಾಯ ವಂಚಿತರಾಗಿದ್ದಾರೆ.

ಆದುದ್ದರಿಂದ ಮಾನ್ಯ ಸಿದ್ಧರಾಮಯ್ಯ ಸರಕಾರ ಈ ಪ್ರಕರಣವನ್ನು ಮರು ತನಿಖೆಗೆ ಆದೇಶ ಮಾಡಬೇಕು ಮತ್ತು ನೊಂದ ಸೌಜನ್ಯ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರದ ಜೊತೆಗೆ ಅವರ ಕುಟುಂಬಕ್ಕೆ ಒಂದು ಸರಕಾರಿ ನೌಕರಿಯನ್ನು ನೀಡಬೇಕು
ಹಾಗೂ 11 ವರ್ಷಗಳ ಶಿಕ್ಷೆಗೆ ಗುರಿಯಾಗಿರುವ ಅಮಾಯಕ ಸಂತೋಷ್ ರಾವ್ ಕುಟುಂಬಕ್ಕೂ ಸೂಕ್ತ ಪರಿಹಾರ ನೀಡಬೇಕು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಉಡುಪಿ ಮತ್ತು ದಲಿತ ಸಂಘರ್ಷ ಸಮಿತಿ ಭೀಮವಾದ (ರಿ) ಉಡುಪಿ ಜಿಲ್ಲೆ
ಈ ಮನವಿಯ ಮೂಲಕ ಮಾನ್ಯ ಸರ್ಕಾರವನ್ನು ಒತ್ತಾಯಿಸಿ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಸಂಘಟನೆಯ ಮತ್ತು ಪಕ್ಷದ ಪ್ರಮುಖರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ. ಪ್ರಮುಖರಾದ ಶೇಖರ್ ಹಾವಂಜೆ, ಸದಾಶಿವ ಶೆಟ್ಟಿ ಹೇರೂರು, ಸಂಜೀವ ಕುಕ್ಕೆಹಳ್ಳಿ, ವಿಜಯ್ ಬಾರ್ಕೂರು,ಅನಿಲ್ ಫೆರ್ನಾಂಡಿಸ್, ಅಕ್ಬರ್ ಬಾಷಾ, ರಮೇಶ್ ಮಾಬಿಯಾನ್, ಪ್ರಭಾಕರ್ ಅಮ್ಮುಂಜೆ, ಪೃಥ್ವಿ ಒಳಗುಡ್ಡೆ, ಸುಜಾತ ಹಾವಂಜೆ, ಪೂರ್ಣಿಮಾ ಬೈರಂಪಳ್ಳಿ, ಸೀನ ಬೈರಂಪಳ್ಳಿ, ನಾಥು ಒಳಗುಡ್ಡೆ , ಮಹಾಬಲ ಒಳಗುಡ್ಡೆ, ಬೇಬಿ, ಕರ್ಣ, ವಿಜಯ್ ಅಮ್ಮುಂಜೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

swabhimananews@gmail.com

Related posts

ಕುಂದಾಪುರ ಬ್ಲಾಕ್ ಕಾಂಗ್ರೆಸ್‌ ವತಿಯಿಂದ ನಗರದಲ್ಲಿ ಬೃಹತ್ ಪಾದಯಾತ್ರೆ: ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಮತಯಾಚನೆ-ಅಭಿವೃದ್ಧಿಗೆ ನಿಮ್ಮ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ.

Swabhimana News Desk

ಬೈಂದೂರು ರಾಜಾರೋಷವಾಗಿ ಪ್ರಭಾವಿ ವ್ಯಕ್ತಿಗಳು ಎಲ್ಲೆಂದರಲ್ಲಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ.ಕಣ್ಣು, ಬಾಯಿ, ಕಿವಿ ಇದ್ದೂ ಕುರುಡರು,ಮೂಗರು,ಕಿವುಡರಾದ ಉಡುಪಿ ಜಿಲ್ಲೆಯ ಅಧಿಕಾರಿಗಳು.

Swabhimana News Desk

ಫ್ಲೈಓವರ್‌ನಿಂದ ಸರ್ವಿಸ್ ರಸ್ತೆಗೆ ಬಿದ್ದ ಕಾರು ದಂಪತಿ ಸಾವು; ಪುತ್ರ ಪ್ರಾಣಾಪಾಯದಿಂದ ಪಾರು

Swabhimana News Desk

Leave a Comment